ಬ್ರೇಕಿಂಗ್ ನ್ಯೂಸ್
05-05-22 04:09 pm HK Desk News ಕರ್ನಾಟಕ
ಬೆಳಗಾವಿ, ಮೇ 5 : ಮೈಸೂರು ತಾಲೂಕಿನಲ್ಲಿ ಕೌಲಂದೆ ಛೋಟಾ ಪಾಕಿಸ್ತಾನ ಅಂತಾ ಕೆಲವರು ಘೋಷಣೆ ಹಾಕಿದ್ದಾರೆ. ನೀವು ಭಾರತದ ಅನ್ನ ತಿನ್ನುತ್ತೀರಿ, ದೇಶದ್ರೋಹಿ ಘೋಷಣೆ ಹಾಕ್ತೀರಿ. ಸರ್ಕಾರ ತಕ್ಷಣವೇ ಅವರನ್ನ ಒದ್ದು ಒಳಗೆ ಹಾಕಬೇಕು. ಇಲ್ಲವಾದ್ರೆ ಶ್ರೀರಾಮ ಸೇನೆ ಕೌಲಂದೆ ಚಲೋ ನಡೆಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಮುತಾಲಿಕ್, ಹಲವಾರು ವರ್ಷಗಳಿಂದ ಆಜಾನ್ ಮೈಕಿನ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ಆಜ್ಞೆ ಉಲ್ಲಂಘನೆ ಆಗುತ್ತಿದ್ದು ನಾವು ತಹಸೀಲ್ದಾರ್, ಡಿಸಿ ಅವರಿಗೆ ಮೇ 1ರ ಗಡುವು ಕೊಟ್ಟಿದ್ದೆವು. ಆದ್ರು ಬರೀ ನೋಟಿಸ್ ಕೊಟ್ಟಿದ್ದಾರೆ ಹೊರತು ಆಜಾನ್ ನಿಲ್ಲಿಸಿಲ್ಲ. ಮೇ 9ರಂದು ಒಂದು ಸಾವಿರಕ್ಕೂ ಹೆಚ್ಚು ದೇವಸ್ಥಾನದಲ್ಲಿ ಬೆಳಗ್ಗೆ 5.30 ಗಂಟೆಗೆ ಸುಪ್ರಭಾತ, ಹನುಮಾನ್ ಚಾಲಿಸಾ ಅಭಿಯಾನ ಆರಂಭಿಸುತ್ತಿದ್ದೇವೆ. ಸಮಾಜದಲ್ಲಿ ಬೇರು ಬಿಟ್ಟಿರುವ ಮುಸ್ಲಿಂ ಮಾನಸಿಕತೆ ಹೋಗಬೇಕಿದೆ. ನೀವು ನಮ್ಮ ಹೋರಾಟದ ವಿರುದ್ಧ ಕ್ರಮಕ್ಕೆ ಮುಂದಾದ್ರೆ ಸಂಘರ್ಷ ಆಗಲಿದೆ ಎಂದು ಹೇಳಿದ್ದಾರೆ.
ನಮ್ಮ ಹೋರಾಟ ಆಜಾನ್ ವಿರುದ್ಧ ಅಲ್ಲ, ಮೈಕಿನ ಧ್ವನಿಯಿಂದ ಆಗುತ್ತಿರುವ ಶಬ್ಧಮಾಲಿನ್ಯದ ವಿರುದ್ಧ ಅಷ್ಟೇ. ಹೇಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಜಾನ್ ಕೂಗುವ ಮೈಕ್ ಮೇಲೆ ಕ್ರಮ ಕೈಗೊಂಡರೋ ಅದೇ ರೀತಿ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳೇ ಧೈರ್ಯ ತೋರಿಸಿ ಹೊರತು ಹೆದರಬೇಡಿ. ಮುಂದಿನ ಬಾರಿ 150 ಸೀಟು ಬೇಕಂದ್ರೆ ಧೈರ್ಯ ತೋರಿಸಬೇಕು. ಯೋಗಿ ಅವರಂತೆ ಮುಖ್ಯಮಂತ್ರಿ ಬೊಮ್ಮಾಯಿ ಗಂಡಸ್ಥನ ತೋರಿಸಬೇಕು ಎಂದು ಮುತಾಲಿಕ್ ಹೇಳಿದರು.
ಎಂಡಿಎಫ್ ಬಗ್ಗೆ ತನಿಖೆ ನಡೆಸಿ
ಮಂಗಳೂರಿನಲ್ಲಿ ಎಂಡಿಎಫ್ ಸಂಘಟನೆ ಸಕ್ರಿಯವಾಗಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಮುಸ್ಲಿಂ ಡಿಫೆನ್ಸ್ ಫೋರ್ಸ್ ಅಂತಾ ಮಾಡಿದ್ದಾರೆ. ಅದರಿಂದ ಖಟ್ಟರ್ ಮುಸ್ಲಿಮರನ್ನು ತಯಾರು ಮಾಡುವ ಪ್ರಕ್ರಿಯೆ ಆಗ್ತಾ ಇದೆ. ಒತ್ತಾಯದ ಮೂಲಕ ಮಾಡುವ ಮೂಲಭೂತವಾದಿಗಳ ತಯಾರಿಸುವ ಮಾಹಿತಿ ಇದೆ. ಪಿಎಫ್ಐ, ಸಿಎಫ್ಐ, ಎಸ್ಡಿಪಿಐ, ಎಐಎಂಐಎಂ ಸಂಘಟನೆಗಳ ಜೊತೆ ಎಂಡಿಎಫ್ ಸಂಘಟನೆ ಹುಟ್ಟುಹಾಕಿದ್ದಾರೆ. ಈ ಎಲ್ಲಾ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿಟ್ಟು ಕ್ರಮ ಕೈಗೊಳ್ಳಬೇಕು. ಎಂಡಿಎಫ್ ಚಟುವಟಿಕೆ ಗಮನಿಸಿ ಸರ್ಕಾರ ಹದ್ದುಬಸ್ತಿನಲ್ಲಿಡಬೇಕು.
ಎಂಡಿಎಫ್ ಚಿಹ್ನೆ, ಮೆಸೇಜ್ ನೋಡಿದ್ರೆ ಅಲ್ಖೈದಾ ಮಾದರಿ ವರ್ತನೆ, ಲಕ್ಷಣಗಳು ಕಾಣುತ್ತಿವೆ. ಈಗ ಹೊಸದಾಗಿ ಹುಟ್ಟು ಹಾಕಿದ್ದಾರೋ ಮೊದಲು ಇತ್ತೋ ಎಂಬ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
We have been fighting Azan Mike for many years. The Supreme Court order is being violated and we gave Tehsildar, DC a deadline of May 1. Azan does not stop, except that he has only issued notice.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm