ಬ್ರೇಕಿಂಗ್ ನ್ಯೂಸ್
03-08-20 05:14 am Bangalore Correspondent ಕರ್ನಾಟಕ
ಬೆಂಗಳೂರು (ಆ.3): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ಅವರ ಪುತ್ರಿ ಪದ್ಮಾವತಿ ಅವರಿಗೂ ಸೋಂಕು ತಗುಲಿದೆ.
ಭಾನುವಾರ ರಾತ್ರಿ ನಡೆಸಿದ ಪರೀಕ್ಷೆ ವೇಳೆ ಪದ್ಮಾವತಿ ಅವರಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಅವರನ್ನೂ ಸಹ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯ 5ನೇ ಮಹಡಿಯ ವಿಶೇಷ ವಾರ್ಡ್ ನಲ್ಲಿ ಸಿಎಂ ಯಡಿಯೂರಪ್ಪ ದಾಖಲಾಗಿದ್ದು, ಪಕ್ಕದ ವಿಶೇಷ ವಾರ್ಡ್ ನಲ್ಲಿ ಪುತ್ರಿ ಪದ್ಮಾವತಿ ಅವರು ದಾಖಲಾಗಿದ್ದಾರೆ. ಪುತ್ರಿ ಪದ್ಮಾವತಿ ಅವರೇ ತಂದೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಅಲ್ಲದೆ ಪದ್ಮಾವತಿ ಅವರು ಫೋನ್ ಮೂಲಕ ಕುಟುಂಬದವರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ. ಆದರೆ ಪುತ್ರಿ ಪದ್ಮಾವತಿ ಅವರಿಗೆ ಪಾಸಿಟಿವ್ ಬಂದಿದೆ. ಸಿಎಂಗೆ ಹಾಗೂ ಪುತ್ರಿಗೆ ಸೋಂಕು ತಗುಲಿದ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ವಿಜಯೇಂದ್ರ ಅವರು 1 ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ.
ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದರು. ಸಿಎಂ ಸಹ ಚಿಕಿತ್ಸೆಗಾಗಿ ಎಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm