ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 08:36 pm
HK News Staffer
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm