ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am