ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.
ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm