ಬ್ರೇಕಿಂಗ್ ನ್ಯೂಸ್
06-05-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಸಿಎಂ ಸ್ಥಾನಕ್ಕಾಗಿ ಎರಡೂವರೆ ಸಾವಿರ ಕೋಟಿ ಕೇಳಿದ್ದಾರೆ ಎನ್ನುವ ವಿಚಾರ ಇಡೀ ಕರ್ನಾಟಕ ರಾಜ್ಯ ತಲೆ ತಗ್ಗಿಸುವಂಥದ್ದು. ಮಾತ್ರವಲ್ಲ, ಸಂವಿಧಾನ, ಪ್ರಜಾಪ್ರಭುತ್ವ ಗಾಳಿಗೆ ತೂರಿ ಬಿಜೆಪಿಯವರು ಹಣದ ಮೇಲೆ ರಾಜಕಾರಣ ಮಾಡ್ತಿದಾರೆ ಎನ್ನೋದಕ್ಕೆ ಸ್ಪಷ್ಟ ನಿದರ್ಶನ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹರಿಪ್ರಸಾದ್ ಅವರು, ಸಿಎಂ ಮಾಡಲು ಕೇಂದ್ರದ ನಾಯಕರು 2500 ಕೋಟಿ ಕೊಡಿ ಎಂದಿದ್ದನ್ನು ಯತ್ನಾಳ್ ಹೇಳಿದ್ದಾರೆ. ಈಗ ಯತ್ನಾಳ್ ಅವರೇ ಅಷ್ಟು ಹಣವನ್ನು ಕೇಳಿದ ವ್ಯಕ್ತಿ ಯಾರೆಂದು ಸ್ಪಷ್ಟಪಡಿಸಬೇಕು. ಈ ಮಾತಿನ ಹಿನ್ನೆಲೆ ಏನೆಂದರೆ, ಈ ಹಿಂದೆ ಅಮಿತ್ ಶಾ ಚುನಾವಣೆಗಳು ನಮಗೆ ವ್ಯವಹಾರ ಇದ್ದಂತೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಾಕ್ಷಿ ಎನ್ನುವಂತೆ ಯತ್ನಾಳ್ ಅವರಿಗೆ ಎರಡುವರೆ ಸಾವಿರ ಕೋಟಿ ಹಣ ಕೇಂದ್ರದ ನಾಯಕರು ಕೇಳಿರಬೇಕು. ಈ ವಿಷಯದಲ್ಲಿ ಯತ್ನಾಳ್ ಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಧರ್ಮದ ಮೇಲೆ, ಹಣದ ಮೇಲೆ ರಾಜಕೀಯ ನಡೆಸುವುದು ಬಿಜೆಪಿಯ ಚುನಾವಣಾ ತಂತ್ರವಾಗಿದ್ದು, ಹಣ ಕೇಳಿದ್ದು ಯಾರು ಎಂದು ಕೂಡಲೇ ಯತ್ನಾಳ್ ಸ್ಪಷ್ಟಪಡಿಸಬೇಕು. ಅಮಿತ್ ಶಾ ಕೇಳಿದ್ದಾ? ಮೋಹನ್ ಭಾಗವತ್ ಕೇಳಿದ್ದಾ? ನಡ್ಡಾ ಕೇಳಿದ್ದಾ? ಇಲ್ಲ ಮೋದಿ ಅವ್ರು ಕೇಳಿದ್ದಾ? ಎಂದು ಬಿಜೆಪಿ ಕೇಂದ್ರದ ನಾಯಕರ ಮೇಲೆ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಈ ವಿಚಾರವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಹೇಳಿಕೆ ಕುರಿತು ತನಿಖೆಗೆ ಆದೇಶಿಸಬೇಕು ಎಂದವರು ಒತ್ತಾಯಿಸಿದರು.
BJP leader Basanagouda Patil Yatnal on Friday has flared up a major political controversy in Karnataka, alleging that he was asked him to pay a Rs 2,500 crore bribe to become Chief Minister.While addressing a rally of Panchamasali community in Ramdurg of Belagavi district on Friday, the BJP MLA said, “A few people from Delhi, who said that they were close to Congress President and BJP President asked me to pay Rs 2,500 crore to become Chief Minister.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm