ಬ್ರೇಕಿಂಗ್ ನ್ಯೂಸ್
08-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 07 : ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಜನಪ್ರಿಯ ಹಾಸ್ಯ ನಟಿ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಶನಿವಾರ (ಮೇ 7) ತಡರಾತ್ರಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸುನೇತ್ರಾ ಪಂಡಿತ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಎನ್.ಆರ್. ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ ಮತ್ತು ರಸ್ತೆ ಗುಂಡಿ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಪಘಾತದಲ್ಲಿ ಸುನೇತ್ರಾ ಪಂಡಿತ್ ಅರಿಗೆ ಗಂಭೀರವಾದ ಗಾಯಗಳಾಗಿದ್ದು, ತೀವ್ರ ಸ್ರಾವವಾಗಿದೆ. ಕೂಡಲೇ ಸ್ಥಳೀಯರು ಸುನೇತ್ರ ಅವರನ್ನು ಬಸವನಗುಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸುನೇತ್ರಾ ಅವರು ಕಿರುತೆರೆ ಲೋಕದ ಚಿರಪರಿಚಿತ ಕಲಾವಿದರು. ಹಾಸ್ಯ, ಗಂಭೀರ ಎಲ್ಲ ಪಾತ್ರಗಳಿಗೂ ಸುನೇತ್ರಾ ಸೈ ಅನ್ನಿಸಿಕೊಂಡಿದ್ದಾರೆ. ಇದರ ಜೊತೆಗೆ ಸುನೇತ್ರ ಓರ್ವ ಡಬ್ಬಿಂಗ್ ಆರ್ಟಿಸ್ಟ್ ಕೂಡ ಆಗಿದ್ದಾರೆ. ಸುನೇತ್ರಾ ಅವರು ಹಲವು ಪಾತ್ರಗಳಿಗೆ ಬಣ್ಣ ಹಚ್ಚಿದ್ದರೂ, ಸಿಲ್ಲಿ ಲಲ್ಲಿ ಧಾರಾವಾಹಿಯ ವಿಶಾಲು ಪಾತ್ರ ಎಲ್ಲರ ಮನಗೆದ್ದಿತ್ತು. ರಂಗಭೂಮಿ ಕಲಾವಿದೆಯಾಗಿರುವ ಸುನೇತ್ರ ಅವರು, ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇನ್ನು ಸುನೇತ್ರಾ ಅವರ ಪತಿ ರಮೇಶ್ ಪಂಡಿತ್ ಕೂಡ ಕಲಾವಿದರಾಗಿದ್ದು, ಚಂದನವನದಲ್ಲಿ ಖಳನಟರಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ರಮೇಶ್ ಪಂಡಿತ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
Television actress Sunetra Pandit has suffered minor injuries in a road accident. She was riding a motorcycle when the unfortunate incident happened in Bengaluru. The actress who has suffered minor injuries is currently recuperating at a private hospital in Basvanagudi. Police have registered a case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am