ಬ್ರೇಕಿಂಗ್ ನ್ಯೂಸ್
09-05-22 07:38 pm Bengalore Correspondnt ಕರ್ನಾಟಕ
ಬೆಂಗಳೂರು, ಮೇ 9: ಆಜಾನ್ ಹೆಸರಲ್ಲಿ ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಭಯೋತ್ಪಾದಕರು. ಎರಡು ಧರ್ಮಗಳ ನಡುವೆ ವಿಷ ಬಿತ್ತಿ ಸಮಾಜದಲ್ಲಿ ದ್ವೇಷ ಹರಡುವ ಮಂದಿಯನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಂಧಿಸುವ ಬದಲು ಬಿಜೆಪಿ ಸರಕಾರ ಸಮರ್ಥನೆ ಮಾಡುತ್ತಿದೆ. ಸರಕಾರದ ವೈಫಲ್ಯ ಮುಚ್ಚಿ ಹಾಕಲು ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ಬಿಜೆಪಿ ಬೆಂಬಲಿಸುತ್ತಿದೆ. ಆಮೂಲಕ ಜ್ವಲಂತ ವಿಚಾರಗಳು ಜನರು ಚರ್ಚೆ ಮಾಡದಂತೆ ಮಾಡುವ ಪ್ರಯತ್ನ. ಬಿಜೆಪಿ ಮಂದಿ ಆರೆಸ್ಸೆಸ್ ಕೈಗೊಂಬೆಗಳಾಗಿದ್ದಾರೆ. ಸಂಘ ಪರಿವಾರ ಹೇಳಿದಂತೆ ನಡೆಯುತ್ತಿದ್ದಾರೆ. ದ್ವೇಷ ಹರಡುವ ಮಂದಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಸೀದಿಗಳ ಆಜಾನ್ ವಿರೋಧಿಸಿ ಅಭಿಯಾನ ನಡೆಸಲಾಗುತ್ತಿದ್ದು ದೇವಸ್ಥಾನ, ಮಂದಿರಗಳ ಆವರಣದಲ್ಲಿ ಆಜಾನ್ ಕೂಗುವ ಸಂದರ್ಭದಲ್ಲೇ ಧ್ವನಿವರ್ಧಕ ಬಳಸಿ ಹನುಮಾನ್ ಚಾಲೀಸಾ ಪಠಣ ಹಾಕಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ರಾಜ್ಯ ಸರಕಾರ ಪಾಲನೆ ಮಾಡದೇ ಇರುವುದರಿಂದ ಹಿಂದು ಸಂಘಟನೆಗಳು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಇದೀಗ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರೋಕ್ಷವಾಗಿ ಹಿಂದು ಸಂಘಟನೆಗಳ ನಾಯಕರನ್ನು ಭಯೋತ್ಪಾದಕರು ಎಂದು ಜರೆದಿದ್ದಾರೆ.
ಇದೇ ವೇಳೆ, ರಾಜ್ಯದ ಹಲವು ಕಡೆ ಶ್ರೀರಾಮ ಸೇನೆ ಮತ್ತು ಇತರ ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆಜಾನ್ ಸಂದರ್ಭದಲ್ಲಿ ಅಭಿಯಾನದ ಹೆಸರಲ್ಲಿ ಸಂಘರ್ಷಕ್ಕೆ ದಾರಿಯಾಗುತ್ತದೆ ಎಂದು ಹೇಳಿ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ. ಆದರೆ, ಪ್ರಮೋದ್ ಮುತಾಲಿಕ್ ಮಾತ್ರ ಹಿಂದು ಸಂಘಟನೆಗಳ ಅಭಿಯಾನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
The Opposition leader in the Legislative Council B.K. Hariprasad on Monday courted controversy when he said that those who are campaigning against Azaan are terrorists.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm