ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm