ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm