ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm