ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm