ಪಿಎಸ್ಐ ಅಕ್ರಮ ; ಮಂಡ್ಯದಲ್ಲಿ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷನ ಬಂಧನ, ಅಭ್ಯರ್ಥಿಗೆ ಮಧ್ಯವರ್ತಿಯಾಗಿದ್ದ ಆರೋಪಿ ! 

11-05-22 06:33 pm       HK Desk News   ಕರ್ನಾಟಕ

ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಹಗರಣ ಸಂಬಂಧಿಸಿ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಬಂಧಿತ ವ್ಯಕ್ತಿ. 

ಮಂಡ್ಯ, ಮೇ 11 : ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಹಗರಣ ಸಂಬಂಧಿಸಿ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಬಂಧಿತ ವ್ಯಕ್ತಿ. 

ಶ್ರವಣಬೆಳಗೊಳದಲ್ಲಿ ಪಿಎಸ್‌ಐ ಪರೀಕ್ಷೆ ಬರೆದು ಸಿಕ್ಕಿಬಿದ್ದ ಆರೋಪಿ ಪರವಾಗಿ ಮಧ್ಯವರ್ತಿಯಾಗಿ ಶರತ್ ರಾಮಣ್ಣ ಕೆಲಸ ಮಾಡಿದ್ದ ಎನ್ನಲಾಗುತ್ತಿದೆ. ಆರೋಪದ ಹಿನ್ನೆಲೆ ಶರತ್ ರಾಮಯ್ಯನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

ಶರತ್ ಬಂಧನ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೊಗಳು ವೈರಲ್ ಆಗಿವೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಮುಜುಗರಕ್ಕೆ‌ ಒಳಗಾಗುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಮಂಡ್ಯಕ್ಕೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಲ್ಲಿ ಕೇಳಿದಾಗ, ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ಇದರಲ್ಲಿ ರಾಜಿಯ ಮಾತೇ ಇಲ್ಲ. ಯಾವುದೇ ಪಕ್ಷದ ನಾಯಕರಿದ್ದರೂ ಅರೆಸ್ಟ್ ಮಾಡಬೇಕು. ಬಂಧಿಸಿದ್ದು ಒಳ್ಳೆಯ ವಿಚಾರ ಎಂದು ಹೇಳಿದ್ದಾರೆ.

The CID is conducting an ongoing investigation into the PSI scam. The CID has detained a Congress leader in Mandya for this backdrop.President of Mandalaya Nagamangala Youth Congress Taluk. Sarath Ramanna is accused of illegally operating on behalf of PSI. It is also alleged that he was a mediator in the matter of PSI work. Sarath Ramaiah has been taken into custody by CID authorities on these charges. Are currently investigating.