ಬಿಜೆಪಿ ಹೈಕಮಾಂಡ್ ಬುಲಾವ್ ; ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ದೆಹಲಿಗೆ ! 

11-05-22 10:39 pm       HK Desk News   ಕರ್ನಾಟಕ

ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ. 

ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ. 

ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. 

Karnataka CM Basavaraj Bommai finally allocates cabinet portfolios - The  Economic Times

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.

Home Minister Araga Jnanendra called by High command to Delhi.