ಬ್ರೇಕಿಂಗ್ ನ್ಯೂಸ್
13-05-22 01:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರವು, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸದೆ ಎದುರಿಸುವ ಪ್ರಶ್ನೆಯೇ ಇಲ್ಲ ಎಂಬ ನಿಲುವಿಗೆ ಬಂದಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾನೂನು ತಜ್ಞರ ಜತೆ ಸಭೆ ನಡೆಸಿದ್ದು ಇದರ ಮಾಹಿತಿಯನ್ನು ಸಚಿವ ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ನೀಡಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ಕುರಿತು ಚರ್ಚೆ ನಡೆಸಿಲ್ಲ. ಆದರೆ, ಮುಖ್ಯಮಂತ್ರಿಗಳ ಜತೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದುಳಿದ ವರ್ಗಕ್ಕೆ ಈ ಹಿಂದಿನ ಮೀಸಲಾತಿ ಅನ್ವಯವಾದರೂ ಸರಿ ಅಥವಾ ಹೊಸದಾಗಿ ಸರ್ಕಾರ ರೂಪಿಸುತ್ತಿರುವ ಮೀಸಲಾತಿ ಅನ್ವಯವಾದರೂ ಸರಿ, ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿ ಮಾಡುತ್ತೇವೆ ಎಂದರು.

ಮೀಸಲಾತಿ ನಿಗದಿ ಮಾಡುವ ಸಂಬಂಧ ನ್ಯಾ.ಭಕ್ತವತ್ಸಲಂ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. 3-4 ತಿಂಗಳಲ್ಲಿ ವರದಿ ನೀಡಲಿದೆ. ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ವರದಿಯನ್ನು ಆದಷ್ಟು ಬೇಗ ನೀಡುವಂತೆ ತಿಳಿಸಲಾಗಿದೆ. ಸಮಿತಿಯು ವರದಿ ನೀಡಲು ಸಮಯ ತೆಗೆದುಕೊಳ್ಳುವುದರಿಂದ ಮೂರು ತಿಂಗಳಾದರೂ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲು ತೀರ್ಮಾನಿಸಲಾಗಿದೆ. 1983ರಿಂದ ಹಿಂದುಳಿದ ವರ್ಗಕ್ಕೆ ಮೀಸಲಾತಿ ಕಲ್ಪಿಸಲಾಗುತ್ತಿದೆ. ಮೀಸಲಾತಿ ಇಲ್ಲದೆ ಚುನಾವಣೆ ಎದುರಿಸಲು ಸಾಧ್ಯವಿಲ್ಲ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಮತ್ತು ಒಬಿಸಿ ಸಂಘಟನೆಗಳು ಸಲ್ಲಿಸಿರುವ ಎರಡು ಅಥವಾ ಮೂರು ಅರ್ಜಿಗಳು ಮೇ 17 ರಂದು ಕರ್ನಾಟಕ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರಲಿದ್ದು, ಸರ್ಕಾರವು ತನ್ನ ಮುಂದಿನ ಕ್ರಮ ಕೈಗೊಳ್ಳುವ ಆದೇಶಕ್ಕಾಗಿ ಕಾತರದಿಂದ ಕಾಯುತ್ತಿದೆ ಎಂದರು. ಮಧ್ಯಪ್ರದೇಶ, ಮಹಾರಾಷ್ಟ್ರ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ, ರಾಜ್ಯದ ವಿಚಾರಕ್ಕೆ ಬಂದರೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ ಎಂದಿದ್ದಾರೆ.
The government is considering moving the Supreme Court seeking three months’ time to fix reservations for other backward castes (OBCs) by studying their political backwardness, Law Minister J C Madhuswamy said on Thursday.“We have also asked Justice Bhaktavatsala to submit a report at the earliest,” he said, referring to the committee formed under the retired HC judge to study the political backwardness of the OBCs.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm