ಬ್ರೇಕಿಂಗ್ ನ್ಯೂಸ್
14-05-22 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಯುವತಿ ಮೇಲೆ ಆಸಿಡ್ ದಾಳಿಗೈದು ತಲೆಮರೆಸಿಕೊಂಡು ಪೊಲೀಸರ ಬಲೆಗೆ ಬಿದ್ದ ಆರೋಪಿ ನಾಗೇಶ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ.
ಬೆಂಗಳೂರಿನ ಕೆಂಗೇರಿಯ ಮೇಲ್ಸೇತುವೆ ಬಳಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ತಮಿಳುನಾಡು ಕಡೆಯಿಂದ ನೈಸ್ ರೋಡಲ್ಲಿ ಬೆಂಗಳೂರಿಗೆ ಬರುತ್ತಿದ್ಬದಾಗ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ಕೇಳಿಕೊಂಡಿದ್ದ. ಆದರೆ ಅನುಮತಿ ಕೊಡದ ಪೊಲೀಸರು, ಬೆಂಗಳೂರು ನಗರದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಗೆ ನಿಲ್ಲಿಸಿದ್ದರು.

ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಹಿಡಿಯಲು ಹೋದ ಕಾನ್ಸ್ಟೇಬಲ್ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಗಾಳಿಯಲ್ಲಿ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದ್ದರು. ಆದರೆ ಇನ್ಸ್ಪೆಕ್ಟರ್ ಎಚ್ಚರಿಕೆಗೂ ಬಗ್ಗದ ನಾಗೇಶ್, ತಪ್ಪಿಸಿಕೊಂಡು ಓಡಲು ಮುಂದಾಗಿದ್ದ. ಹೀಗಾಗಿ ಆರೋಪಿ ನಾಗೇಶ್ ಬಲಗಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

15 ದಿನಗಳಿಂದ ಆರೋಪಿ ನಾಗೇಶ್, ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷ ಧರಿಸಿ ತಲೆಮರೆಸಿಕೊಂಡಿದ್ದ. ಪೊಲೀಸರು ಈ ಬಗ್ಗೆ ಮಾಹಿತಿ ಪಡೆದು ಮಾರು ವೇಷದಲ್ಲಿ ಹೋಗಿ ಗುರುವಾರ ಬಂಧಿಸಿದ್ದರು. ಅಲ್ಲಿಂದ ಕರೆತರುತ್ತಿದ್ದಾಗಲೇ ತಪ್ಪಿಸಲು ಯತ್ನಿಸಿ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾನೆ.
The youth, who had made him scarce in a well-planned manner after flinging acid on a 23-year-old woman in Bengaluru last month and seriously injured her, was finally nabbed by the Karnataka Police from Tamil Nadu's Tiruvannamalai city, where he had disguised himself as a religious seer, officials said on Friday Meanwhile, the 23-year-old acid victim has been shifted to general ward following the recovery in her health, 16 days after treatment in Intensive Care Unit (ICU).
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm