ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm