ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm