ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm