ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm