ಬ್ರೇಕಿಂಗ್ ನ್ಯೂಸ್
17-05-22 10:52 am Bangalore Correspondent ಕರ್ನಾಟಕ
ಬೆಂಗಳೂರು, ಮೇ 16: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಬೆಂಗಳೂರಿನ ಬಿಜೆಪಿ ಮುಖಂಡನ ಸಾವಿನ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು, ಸಾವಿಗೆ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ ಮೇಲ್ ಕಾರಣ ಅನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಸಾವಿಗೆ ಶರಣಾದ ಬಿಜೆಪಿ ಮುಖಂಡ ಅನಂತರಾಜು ಅವರ ಪತ್ನಿ ಡೆತ್ ನೋಟ್ ಆಧರಿಸಿ ದೂರು ನೀಡಿದ್ದಾರೆ.
ಅನಂತರಾಜು ಮೇ 12ರಂದು ಸಂಜೆ ತನ್ನ ಮನೆಯ ಮೇಲಿನ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದ ಅನಂತರಾಜು ಹಠಾತ್ ಸಾವಿಗೆ ಶರಣಾಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಘಟನೆ ಬಳಿಕ ತೀವ್ರ ನೊಂದಿದ್ದ ಅವರ ಪತ್ನಿ ಸುಮಾಗೆ ಮೂರು ದಿನಗಳ ನಂತರ ಬೆಡ್ ರೂಮಿನಲ್ಲಿದ್ದ ಪುಸ್ತಕದಲ್ಲಿ ಗಂಡ ತನ್ನ ಸಾವಿಗೆ ಕಾರಣ ಬರೆದಿಟ್ಟು ಕ್ಷಮೆ ಕೋರಿರುವ ಬರಹ ಪತ್ತೆಯಾಗಿದೆ.
ಮೊದಲಿಗೆ ಥೈರಾಯ್ಡ್ ಸಮಸ್ಯೆ ಇದ್ದುದರಿಂದ ಅನಂತರಾಜು ಆರೋಗ್ಯ ಕಾರಣಕ್ಕೆ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದ ಲೇಡಿಯಿಂದಾಗಿ ಬ್ಲಾಕ್ಮೇಲ್ ಆಗಿರುವ ವಿಚಾರ ಡೆತ್ ನೋಟ್ ನಲ್ಲಿ ಉಲ್ಲೇಖ ಆಗಿದೆ. ಕೆ.ಆರ್.ಪುರಂ ನಿವಾಸಿ ರೇಖಾ ಎಂಬಾಕೆ ಫೇಸ್ಬುಕ್ ರಿಚಯ, ಸ್ನೇಹದ ನೆಪದಲ್ಲಿ ಸಂಬಂಧ ಬೆಳೆಸಿಕೊಂಡು ವಿಡಿಯೋ ಮಾಡಿಟ್ಟು ತನ್ನ ಗಂಡನ ಜೊತೆ ಸೇರಿ ಬ್ಲಾಕ್ಮೇಲ್ ಮಾಡಿದ್ದಾಳೆ. ಅನಂತರಾಜು ಖಾಸಗಿ ಕ್ಷಣಗಳನ್ನು ಕಳೆದಿದ್ದ ಅಶ್ಲೀಲ ಫೋಟೋ ಮತ್ತು ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದರು. ಆಗಾಗ ಹಣ ಕೇಳುತ್ತಿದ್ದರು. ಹಲವು ಬಾರಿ ಹಣ ಕೊಟ್ಟಿದ್ದರೂ, ವಿಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮರ್ಯಾದೆ ತೆಗೆಯುವುದಾಗಿ ಬೆದರಿಸುತ್ತಿದ್ದರು.
ಹೆಚ್ಚಿನ ಹಣ ಕೊಡದೇ ಇದ್ದರೆ ಬಿಜೆಪಿ ಮುಖಂಡರಿಗೆ ವಿಡಿಯೋ ತಲುಪಿಸಿ ರಾಜಕೀಯದಲ್ಲಿ ಹೆಸರು ಕೆಡಿಸುತ್ತೇವೆ ಎಂದು ಬೆದರಿಸುತ್ತಿದ್ದರು. ಇದರಿಂದ ತೀವ್ರ ನೊಂದಿದ್ದ ಅನಂತರಾಜು, ತನ್ನ ಪತ್ನಿಯ ಜೊತೆಗೂ ವಿಷಯ ಹೇಳಿಕೊಂಡಿದ್ದ. ಪತ್ನಿ ಸುಮಾ ಹಲವು ಬಾರಿ ಧೈರ್ಯ ಹೇಳಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪತ್ನಿ ಸುಮಾ ನೀಡಿರುವ ದೂರಿನಂತೆ ರೇಖಾ, ವಿನೋದ್ ಮತ್ತು ಸ್ಪಂದನ ಎಂಬ ಮೂವರ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಆರಂಭಿಸಿದ್ದಾರೆ.
BJP leader Anant Raju’s suicide was widely suspected. Police investigations have now revealed that the woman was found behind the death. Anantaraju is not sick, but has been suicidal in the Honeytrap trap, as is known by many, all of which are mentioned in the Death Note. The FIR has been lodged with the wife of BJP leader Ananta Raju. Rekha, Vinod and Spandana mention the death note written by BJP leader Anantaraju before his suicide.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm