ಬ್ರೇಕಿಂಗ್ ನ್ಯೂಸ್
17-05-22 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17: ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಹೋಗಿ ಸರ್ಜರಿಗೆ ಒಳಗಾಗಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್ (21) ದಾರುಣ ಸಾವು ಕಂಡ ಘಟನೆ ನಡೆದಿದ್ದು ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಪಡೆಯದೆ ಈ ರೀತಿಯ ಅಪಾಯಕಾರಿ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಎನ್ನಲಾಗಿದ್ದು, ಪೋಷಕರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚೇತನಾರಾಜ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಳು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಳು. ತೂಕ ಇಳಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡಿದ್ದು, ದುರಂತ ಸಾವು ಕಂಡಿದ್ದಾಳೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಚೇತನಾ ತಂದೆ ವರದರಾಜು, ದಯವಿಟ್ಟು ಯಾರು ಕೂಡ ತಮ್ಮ ತೂಕ ಇಳಿಸಿಕೊಳ್ಳಲು ಹೋಗಬೇಡಿ. ದಿಢೀರ್ ಆಗಿ ಸಣ್ಣ ಆಗಲು ಹೋದರೆ ಸಾವೇ ಗತಿ. ನೀವು ಈಗ ಹೇಗಿದ್ದೀರೋ ಹಾಗೇ ಇದ್ದುಬಿಡಿ. ಮಕ್ಕಳು ಮನೆಯಲ್ಲಿ ತಿಳಿಸದೆ ಸರ್ಜರಿಗೆ ಒಳಗಾದರೆ ಇಂತಹ ಪರಿಸ್ಥಿತಿ ಬರುತ್ತದೆ. ದಯವಿಟ್ಟು ಯಾರು ಕೂಡ ಫ್ಯಾಟ್ ಸರ್ಜರಿಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Chetana Raj, a television actress, died at the Shetty Cosmetic Hospital in Navrang Circle. Water accumulated in her lungs as a result of the fat surgery. Parents are furious that their child perished as a result of medical malpractice. Munilakshmi, the actress's mother, sobbed in front of her body. Chetana's father, Varadaraj, claimed that the fat surgery was done without the proper equipment or parental approval.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm