ಬ್ರೇಕಿಂಗ್ ನ್ಯೂಸ್
17-05-22 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17: ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಹೋಗಿ ಸರ್ಜರಿಗೆ ಒಳಗಾಗಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್ (21) ದಾರುಣ ಸಾವು ಕಂಡ ಘಟನೆ ನಡೆದಿದ್ದು ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಪಡೆಯದೆ ಈ ರೀತಿಯ ಅಪಾಯಕಾರಿ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಎನ್ನಲಾಗಿದ್ದು, ಪೋಷಕರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚೇತನಾರಾಜ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಳು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಳು. ತೂಕ ಇಳಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡಿದ್ದು, ದುರಂತ ಸಾವು ಕಂಡಿದ್ದಾಳೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಚೇತನಾ ತಂದೆ ವರದರಾಜು, ದಯವಿಟ್ಟು ಯಾರು ಕೂಡ ತಮ್ಮ ತೂಕ ಇಳಿಸಿಕೊಳ್ಳಲು ಹೋಗಬೇಡಿ. ದಿಢೀರ್ ಆಗಿ ಸಣ್ಣ ಆಗಲು ಹೋದರೆ ಸಾವೇ ಗತಿ. ನೀವು ಈಗ ಹೇಗಿದ್ದೀರೋ ಹಾಗೇ ಇದ್ದುಬಿಡಿ. ಮಕ್ಕಳು ಮನೆಯಲ್ಲಿ ತಿಳಿಸದೆ ಸರ್ಜರಿಗೆ ಒಳಗಾದರೆ ಇಂತಹ ಪರಿಸ್ಥಿತಿ ಬರುತ್ತದೆ. ದಯವಿಟ್ಟು ಯಾರು ಕೂಡ ಫ್ಯಾಟ್ ಸರ್ಜರಿಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Chetana Raj, a television actress, died at the Shetty Cosmetic Hospital in Navrang Circle. Water accumulated in her lungs as a result of the fat surgery. Parents are furious that their child perished as a result of medical malpractice. Munilakshmi, the actress's mother, sobbed in front of her body. Chetana's father, Varadaraj, claimed that the fat surgery was done without the proper equipment or parental approval.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm