ಬ್ರೇಕಿಂಗ್ ನ್ಯೂಸ್
17-05-22 05:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾದ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ನಿರ್ಗಮಿತ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಂದ ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ ರೆಡ್ಡಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದವರು. ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಕಲಬುರಗಿ, ವಿಜಯಪುರ, ಮುಂಬೈ, ಬೆಂಗಳೂರು ಸಿಬಿಐ ಘಟಕ ಹಾಗೂ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಅವರಿಗಿದೆ. ಇದಕ್ಕು ಮುನ್ನ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಪ್ರತಾಪ ರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರಿನಲ್ಲಿ ಈ ಹಿಂದೆ ಎಸಿಪಿಯಾಗಿದ್ದಾಗ ಸೈಬರ್ ಸೆಕ್ಯೂರಿಟಿ ವಿಂಗ್ ಸಲಹೆಗಾರರಾಗಿ ಪ್ರತಾಪ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೂ ಭಾಜನರಾಗಿದ್ದರು. ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ಸಿಬಿಐ ಅಧಿಕಾರಿಯಾಗಿದ್ದ ವೇಳೆ ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಯಾಂಕಿಂಗ್, ಸೈಬರ್ ವಂಚನೆ ಪ್ರಕರಣಗಳನ್ನು ಪತ್ತೆ ಮಾಡಿದ್ದರು.
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಳಿಕ 2020ರ ಆಗಸ್ಟ್ನಲ್ಲಿ ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್ ಪಂತ್ ಎರಡು ದಿನಗಳ ಹಿಂದೆ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದರು. ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆ ಪ್ರಕರಣ, ಡ್ರಗ್ಸ್ ಪ್ರಕರಣಗಳಲ್ಲಿ ಕಮಲ್ ಪಂತ್ ಪ್ರಮುಖ ಪಾತ್ರ ವಹಿಸಿದ್ದರು.
Senior IPS officer CH Pratap Reddy, who was the Additional Director General of Police (ADGP), Law & Order, has been appointed as the Police Commissioner of Bengaluru. DGP Kamal Pant, who had a long stint in the most coveted post, has been transferred and posted as DGP (Recruitment). An IPS officer of the 1991 batch, Pratap Reddy, who hails from Guntur in Andhra Pradesh, started his career as assistant SP at Arasikere in Hassan and has served as SP of Bijapur (now Vijayapura) and Gulbarga (now Kalaburagi) districts.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm