ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm