ಬ್ರೇಕಿಂಗ್ ನ್ಯೂಸ್
18-05-22 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ.
ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಆಯೋಗವನ್ನು ರಚನೆ ಮಾಡಿದೆ. ಇದರಿಂದ ಚುನಾವಣೆ ವಿಳಂಬವಾಗುತ್ತಿದೆ. ಆದ್ದರಿಂದ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಲು ಕೋರಿ ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯನ್ನು ನ್ಯಾ.ಎಸ್.ಜಿ ಪಂಡಿತ್ ಮತ್ತು ನ್ಯಾ. ಎಂ.ಜಿ ಉಮಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು ಗಂಭೀರವಾಗಿ ಪರಿಗಣಿಸಿದೆ.
ವಿಚಾರಣೆ ವೇಳೆ ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಪೀಠ, ತಾ.ಪಂ ಮತ್ತು ಜಿ.ಪಂ ಚುನಾವಣೆಗಳನ್ನು ತಕ್ಷಣವೇ ನಡೆಸುವಂತೆ ಕಳೆದ ವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಅದರಂತೆ ಆಯೋಗ ಚುನಾವಣೆಗಳನ್ನು ನಡೆಸುವುದನ್ನು ಬಿಟ್ಟು ಬಾಕಿ ಇರುವ ಅರ್ಜಿಯನ್ನು ಮುಂದಿಟ್ಟು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿರುವುದೇಕೆ ಎಂದು ಪ್ರಶ್ನಿಸಿತು.
ಈ ವೇಳೆ ಚುನಾವಣಾ ಆಯೋಗದ ಪರ ವಕೀಲರು ಕೋರ್ಟಿಗೆ ವಿವರಣೆ ನೀಡಿ, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ರಚಿಸುವ ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇವುಗಳಿಲ್ಲದೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ತಿಳಿಸಿದರು. ವಾದ ಆಲಿಸಿದ ಪೀಠ, ಈ ಕುರಿತಂತೆ ವಿವರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮೇ 23ಕ್ಕೆ ಮುಂದೂಡಿತು.
The Karnataka High Court on Tuesday adjourned hearing of the petition filed by the State Election Commission (SEC) in 2021 questioning the legality of the new law enacted to take away the powers conferred on the commission to carry out the exercise of delimitation, fixing of seats and reservation of seats for Taluk and Zilla Panchayats. A vacation division bench of Justice S G Pandit and Justice M G Uma posted the matter to May 23, 2022, which will be heard by the roster bench.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm