ಬ್ರೇಕಿಂಗ್ ನ್ಯೂಸ್
20-05-22 02:13 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ವಿದೇಶದ ಸಂಸತ್ತಿನಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಡಿಂಡಿಮ ಮೊಳಗಿದೆ. ಉತ್ತರ ಅಮೆರಿಕಾದ ಕೆನಡಾದ ಸಂಸತ್ತಿನಲ್ಲಿ ಕರ್ನಾಟಕ ಮೂಲದ ಸಂಸದರೊಬ್ಬರು ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ನಿವಾಸಿ ಚಂದ್ರ ಆರ್ಯ ಎಂಬವರು 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ತಾವು ಸಂಸತ್ತಿನಲ್ಲಿ ಕನ್ನಡದಲ್ಲಿ ನಾಲ್ಕು ವಾಕ್ಯಗಳನ್ನು ಮಾತನಾಡಿ ತನ್ನ ಮಾತೃಭಾಷೆಯೆಂದು ಹೇಳಿ ಭಾಷಾ ಪ್ರೇಮ ಮೆರೆದಿದ್ದಾರೆ.
ಚಂದ್ರ ಆರ್ಯ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರನಾಗಿದ್ದು ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದರು. ಬಳಿಕ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು. ಆನಂತರ ಕೆನಡಾದಲ್ಲಿ ಉದ್ಯೋಗ ಕಂಡುಕೊಂಡು ಅಲ್ಲಿಯೇ ನೆಲೆಸಿದ್ದರು.
ಈ ಬಗ್ಗೆ ಚಂದ್ರ ಆರ್ಯ ಟ್ವೀಟ್ ಮಾಡಿದ್ದು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಬರೆದುಕೊಂಡಿದ್ದು ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Canada MP Chandra Arya became the first to speak Kannada in a Parliament outside India. While addressing the house, he said in his native language, "Elladaru iru enthadaru iru endendigu nee Kannadavaagiru", which roughly translates to wherever you are, however you are, be a Kannadiga forever."I spoke in my mother tongue (first language) Kannada in Canadian parliament. This beautiful language has long history and is spoken by about 50 million people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm