ಬ್ರೇಕಿಂಗ್ ನ್ಯೂಸ್
21-05-22 04:38 pm HK News Desk ಕರ್ನಾಟಕ
ಮೈಸೂರು, ಮೇ 21 : ಈ ಬಾರಿ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ ಎನ್ನುವ ಮಾಹಿತಿಯಿದ್ದು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದೆ.
ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಮೈಸೂರು ಅಥವಾ ಕಾಶ್ಮೀರದ ಲಡಾಕ್ ನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿತ್ತು. ಮೈಸೂರು ಯೋಗ ಹಬ್ ಆಗಿರುವುದರಿಂದ ಮೋದಿ ಅವರು ಅಂತಿಮವಾಗಿ ಮೈಸೂರಿಗೆ ಬರುವುದನ್ನು ಖಚಿತಪಡಿಸಿದ್ದಾರೆ.
ಈ ಬಾರಿ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆಸಲು ಸಂಸದ ಪ್ರತಾಪಸಿಂಹ ಖುದ್ದು ದೆಹಲಿಗೆ ತೆರಳಿದ್ದರು. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿತ್ತು. ಭದ್ರತಾ ಅಧಿಕಾರಿಗಳಿಂದಲೂ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಮೋದಿ ಮೈಸೂರಿಗೆ ಬರುವುದನ್ನು ಖಚಿತ ಪಡಿಸಿದ್ದಾರೆ ಎನ್ನಲಾಗುತ್ತಿದೆ.
![]()
2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವಾಗಿ ವಿಶ್ವಸಂಸ್ಥೆ ಘೋಷಣೆ ಮಾಡಿದ ಬಳಿಕ ಆಯುಷ್ ಸಚಿವಾಲಯವು ದೇಶಾದ್ಯಂತ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಪ್ರಧಾನಿ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗಾಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು. 2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡಿನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ನರೇಂದ್ರ ಮೋದಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಮಹತ್ವ ಪ್ರಚುರಪಡಿಸಿದ್ದರು. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿರಲಿಲ್ಲ.

ಮೈಸೂರಿನಲ್ಲಿ ಯೋಗ ಫೆಡರೇಶನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಅರಮನೆ ಎದುರು ಅಥವಾ ರೇಸ್ಕೋರ್ಸ್ನಲ್ಲಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಆದರೆ, ಒಂದೂವರೆ ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
Prime Minister Narendra Modi will be part of the International Yoga Day celebrations in Mysuru on June 21.Union Ayush Department told Karnataka Chief Secretary P Ravi Kumar that all necessary arrangements be made for PM's visit. The Ministry of Ayush is the nodal Ministry for observation of the International Day of Yoga every year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm