ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm