ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.
ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm