ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm