ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm