ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm