ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm