ಬ್ರೇಕಿಂಗ್ ನ್ಯೂಸ್
27-05-22 04:43 pm HK News Desk ದೇಶ - ವಿದೇಶ
ಮುಂಬೈ, ಮೇ 27: ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಕ್ಲೀನ್ ಚಿಟ್ ನೀಡಿದೆ.
ಈ ಪ್ರಕರಣದಲ್ಲಿ ಇತರ ನಾಲ್ವರೊಂದಿಗೆ ಸಂಸ್ಥೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂದು ಹೇಳಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ರನ್ನು ಅಕ್ಟೋಬರ್ ಆರಂಭದಲ್ಲಿ ಬಂಧಿಸಲಾಗಿತ್ತು.
ಏನಿದು ಪ್ರಕರಣ?:
ಆರ್ಯನ್ ಖಾನ್ 2021ರ ಅಕ್ಟೋಬರ್ನಲ್ಲಿ ಡ್ರಗ್ ಕೇಸ್ನಲ್ಲಿ ಸಿಲುಕಿಕೊಂಡಿದ್ದರು. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಕಳೆದ ವರ್ಷ ಅಕ್ಟೋಬರ್ 8ರಂದು ಆತನನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಜೈಲಿನಲ್ಲಿದ್ದ ಆರ್ಯನ್ಗೆ ಸತತ ಪ್ರಯತ್ನದ ನಂತರ ಅಕ್ಟೋಬರ್ 28ರ ವೇಳೆಗೆ ಆತನಿಗೆ ಜಾಮೀನು ಸಿಕ್ಕಿತ್ತು.

ಜಾಮೀನು ಸಿಕ್ಕಿದ ನಂತರವೂ ಆತನ ವಿರುದ್ಧ ತನಿಖೆ ಮುಂದುವರೆದಿತ್ತು. ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಸಲು ಎನ್ಸಿಬಿಯ ಎಸ್ಐಟಿ 90 ದಿನಗಳ ಕಾಲಾವಕಾಶ ಕೋರಿತ್ತು. ಅದರಂತೆ ಇಂದು ಎನ್ಸಿಬಿ ಅಂತಿಮ ವರದಿಯನ್ನು ಸಲ್ಲಿಸಿದೆ.

ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ನಲ್ಲಿ ಎನ್ಸಿಬಿ ದಾಳಿ ನಡೆಸಿತ್ತು. ಆ ದಾಳಿಯಲ್ಲಿ ಆರ್ಯನ್ ಖಾನ್ ಸೇರಿ 14 ಮಂದಿಯನ್ನು ಬಂಧಿಸಲಾಗಿತ್ತು. ದಾಳಿ ವೇಳೆ ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು 1.33 ಲಕ್ಷ ರೂ. ನಗದನ್ನು ಎನ್ಸಿಬಿ ವಶಪಡಿಸಿಕೊಂಡಿತ್ತು. ಮುಂಬೈ ಡ್ರಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಆರ್ಯನ್ ಖಾನ್ 25 ದಿನಕ್ಕೂ ಹೆಚ್ಚು ಸಮಯ ಜೈಲಿನಲ್ಲಿ ಕಳೆದಿದ್ದರು. ಬಳಿಕ ಆತನಿಗೆ ಜಾಮೀನು ಸಿಕ್ಕಿತ್ತು.
ದಾಳಿ ವೇಳೆ ಆರ್ಯನ್ ಖಾನ್ ಬಳಿ ಡ್ರಗ್ಸ್ ಪತ್ತೆಯಾಗಿಲ್ಲ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಸಿಂಡಿಕೇಟ್ನ ಭಾಗವಾಗಿದ್ದರು ಎಂಬ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಎಸಿಬಿ ವರದಿ ಸಲ್ಲಿಸಿದೆ. ಹೀಗಾಗಿ ಆರ್ಯನ್ ಖಾನ್ ಈ ಪ್ರಕರಣದಲ್ಲಿ ನಿರ್ದೋಷಿ ಎಂದು ಎನ್ಸಿಬಿ ಘೋಷಿಸಿದೆ.
Shah Rukh Khan and Gauri Khan’s son Aryan Khan was arrested by the Narcotics Control Bureau along with his friend Arbaaz Merchant and model Munmun Dhamecha in relation to the Cordelia cruise drug case. The case had stirred a huge controversy and Khan was later granted bail by the Bombay High Court and he walked out of jail on October 30, 2021. It has now been reported that NCB has given a clean chit to Aryan Khan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm