ಬ್ರೇಕಿಂಗ್ ನ್ಯೂಸ್
27-09-20 03:49 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 27: ಸ್ವರ ಸಾಮ್ರಾಟ ಎಸ್ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಯ ಬಗ್ಗೆ ದಕ್ಷಿಣ ಭಾರತದ ಮತ್ತೊಬ್ಬ ಸಂಗೀತ ಮಾಂತ್ರಿಕ ಕೆ.ಜೆ. ಯೇಸುದಾಸ್ ಭಾವಪೂರ್ಣ ಪತ್ರ ಬರೆದಿದ್ದಾರೆ. ನನ್ನ ಬಹುಕಾಲದ ಗೆಳೆಯ, ಸೋದರ ಅಗಲಿದ್ದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕೊನೆಯ ಬಾರಿಗೆ ನೋಡಬೇಕೆಂಬ ಆಸೆಯನ್ನೂ ಕೊರೊನಾದಿಂದ ಈಡೇರಿಸಿಕೊಳ್ಳಲು ಆಗಿಲ್ಲ ಎಂದು ವಿಷಾದಿಸಿದ್ದಾರೆ.


ನನ್ನ ಸಹೋದ್ಯೋಗಿಗಳ ಪೈಕಿ ಬಾಲು ನನಗೆ ಹತ್ತಿರದ ಸೋದರನಿದ್ದಂತೆ. ಬಾಲು ನನ್ನನ್ನು ಆ ರೀತಿ ನೋಡಿಕೊಂಡಿದ್ದರೇ ಗೊತ್ತಿಲ್ಲ, ಎಸ್ಪಿಬಿ ಮತ್ತು ನನ್ನ ನಡುವಿನ ಸಂಬಂಧ ಮುಂದೆಯೂ ಹಾಗೇ ಇರಲಿದೆ. ಶಾಸ್ತ್ರೀಯ ಶೈಲಿಯಲ್ಲಿ ಸಂಗೀತ ಕಲಿಯದೇ ಇದ್ದರೂ ಎಸ್ಪಿಬಿಯವರ ಸಂಗೀತ ಜ್ಞಾನ ಅಗಾಧ ಆಗಿತ್ತು, ಅವರು ಹಾಡುತ್ತಿದ್ದರು. ಜೊತೆಯಲ್ಲೇ ಮ್ಯೂಸಿಕ್ ಕಂಪೋಸ್ ಕೂಡ ಮಾಡುತ್ತಿದ್ದರು. ಶಂಕರಾಭರಣಂ ಚಿತ್ರದಲ್ಲಿ ಎಸ್ಪಿಬಿಯವರ ಸಂಗೀತ ಜ್ಞಾನ ನಮ್ಮ ಅರಿವಿಗೆ ಬರುತ್ತದೆ. ಶಾಸ್ತ್ರೀಯವಾಗಿ ಕಲಿತು ಬಂದಿದ್ದ ಇನ್ನೊಬ್ಬರ ಜೊತೆಗೆ ಎಸ್ಪಿಯವರು ಅಮೋಘವಾಗಿ ಹಾಡಿದ್ದರು. ಬಾಲು ಯಾರಿಗೂ ನೋವು ತಂದವರಲ್ಲ. ಅಂದ್ರೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಎಲ್ಲರೊಂದಿಗೆ ಆಪ್ತವಾಗಿರುತ್ತಿದ್ದರು. ಒಂದೊಮ್ಮೆ ಎಸ್ಪಿಯವರು ತಮ್ಮ ಕೈಯಾರೆ ತಯಾರಿಸಿದ್ದ ಊಟ ಮಾಡುವ ಅವಕಾಶವೂ ನನಗೆ ಲಭಿಸಿತ್ತು. ಪ್ಯಾರಿಸ್ ನಲ್ಲಿ ಕಾರ್ಯಕ್ರಮಕ್ಕಾಗಿ ತಂಗಿದ್ದ ವೇಳೆ, ಎಸ್ಪಿಬಿಯವರು ನಮಗಾಗಿ ತಾವೇ ಸ್ಪೆಷಲ್ ಆಗಿ ಊಟ ತಯಾರಿಸಿದ್ದರು ಎಂದು ಸ್ಮರಿಸಿದ್ದಾರೆ.
ಕೋವಿಡ್ ಕಾರಣದಿಂದ ದೊಡ್ಡ ನಷ್ಟವನ್ನು ಅನುಭವಿಸುತ್ತಿದ್ದೇವೆ. ನನಗೆ ಅಮೆರಿಕದಿಂದ ಬರುವುದಕ್ಕೆ ಬಿಡುತ್ತಿಲ್ಲ. ಇದರಿಂದಾಗಿ ಕೊನೆಯ ಬಾರಿಗೆ ಎಸ್ಪಿಯವರನ್ನು ನೋಡುವುದಕ್ಕೂ ಆಗಿಲ್ಲ. ಅವರ ಜೊತೆಗಿನ ನೆನಪು ಮಾತ್ರ ಇರಲಿದೆ ಎಂದು ಯೇಸುದಾಸ್ ಭಾವುಕರಾಗಿ ಬರೆದಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm