ಬ್ರೇಕಿಂಗ್ ನ್ಯೂಸ್
28-05-22 09:44 pm HK News Desk ದೇಶ - ವಿದೇಶ
ಜೈಪುರ, ಮೇ 28: ಮೂವರು ಸೋದರಿಯರು ಮತ್ತು ಇಬ್ಬರು ಪುಟಾಣಿ ಮಕ್ಕಳು ಬಾವಿಯಲ್ಲಿ ದುರಂತ ಸಾವು ಕಂಡ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು ಅವರನ್ನು ಗಂಡನ ಮನೆಯವರೇ ಕೊಂದು ಬಾವಿಗೆ ಎಸೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಕಾಳು ದೇವಿ(27), ಮಮತಾ(23), ಕಮಲೇಶ್(20) ಮೂವರು ಸೋದರಿಯರಾಗಿದ್ದು, ಅವರನ್ನು ಕಿರಿಯವಳಿಗೆ ಒಂದು ವರ್ಷ ಇರುವಾಗಲೇ ಹೆತ್ತವರು ಬಾಲ್ಯ ವಿವಾಹ ಮಾಡಿಸಿದ್ದರು. ಅದರಂತೆ, ದೊಡ್ಡವರಾದ ಬಳಿಕ ಒಂದೇ ಕುಟುಂಬದ ಮೂವರು ಸೋದರರು ಬಾಲ್ಯವಿವಾಹದ ಉದ್ಧಟತನದಿಂದ ಮನೆಗೇ ಬಂದು ತೀಟೆ ತೀರಿಸುತ್ತಿದ್ದರು ಎನ್ನಲಾಗಿದೆ. ದೊಡ್ಡಾಕೆ ಕಾಳು ದೇವಿಗೆ ನಾಲ್ಕು ವರ್ಷದ ಮಗ ಮತ್ತು 27 ದಿನದ ಇನ್ನೊಂದು ಮಗು ಇತ್ತು. ಇನ್ನಿಬ್ಬರು ಮಮತಾ ಮತ್ತು ಕಮಲೇಶ್ ತುಂಬು ಗರ್ಭಿಣಿಯರಾಗಿದ್ದರು. ಕಾಳು ದೇವಿ ತಿಂಗಳ ಹಿಂದಷ್ಟೆ ಮಗುವಿಗೆ ಜನ್ಮ ಕೊಟ್ಟಿದ್ದಳು.
ನಾಲ್ಕು ದಿನಗಳ ಹಿಂದೆ ಮೂವರು ಸೋದರಿಯರು ಮತ್ತು ಮಕ್ಕಳು ಕಾಣೆಯಾಗಿದ್ದರು. ಪೊಲೀಸರಿಗೂ ದೂರು ಕೊಡಲಾಗಿತ್ತು. ಆದರೆ, ಪೊಲೀಸರು ಹುಡುಕಾಟ ನಡೆಸಿರಲಿಲ್ಲ. ಇದೀಗ ಮನೆ ಪಕ್ಕದ ಬಾವಿಯಲ್ಲಿ ಮೂವರು ಸೋದರಿಯರು ಮತ್ತು ಇಬ್ಬರು ಮಕ್ಕಳು ದುರಂತ ಸಾವು ಕಂಡ ರೀತಿ ಪತ್ತೆಯಾಗಿದ್ದಾರೆ. ಮೂವರಿಗೂ ಗಂಡಂದಿರು ಕುಡಿದು ಬಂದು ಹೊಡೆಯುತ್ತಿದ್ದರು. ಕಾಳು ದೇವಿಗೆ ಇದೇ ರೀತಿ ಹೊಡೆದು ಕಣ್ಣಿಗೆ ಪೆಟ್ಟಾಗಿ 15 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದಳು. ಮೂವರು ಕೂಡ ತಮ್ಮ ಮನೆಯಲ್ಲೇ ಇದ್ದರೂ, ಗಂಡಂದಿರು ಅಲ್ಲಿಗೆ ಬಂದು ತಮ್ಮ ಪತ್ನಿಯರೆಂದು ಕಿರುಕುಳ ಕೊಡುತ್ತಿದ್ದರು.
ಮೂವರೂ ಹೆಣ್ಣು ಮಕ್ಕಳಾಗಿದ್ದರಿಂದ ಹೆತ್ತವರಿಗೆ ಹೆಣ್ಮಕ್ಕಳು ಎಂಬ ತಾತ್ಸಾರ ಇತ್ತು. ಆದರೆ, ಮೂವರು ಸೋದರಿಯರು ತಮ್ಮ ಬಾಲ್ಯವಿವಾಹ ತಿಳಿದಿದ್ದರೂ ಬಡತನದ ನಡುವೆ ಕಷ್ಟಪಟ್ಟು ಕಲಿಯುತ್ತಿದ್ದರು. ತಾವೇ ತಮ್ಮ ದುಡಿಮೆ ಮಾಡಿಕೊಳ್ಳಬೇಕೆಂದು ಶಿಕ್ಷಣ ಪಡೆದಿದ್ದು ಮಮತಾ ಇತ್ತೀಚೆಗೆ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಬರೆದು ಪಾಸ್ ಆಗಿದ್ದಳು. ಕಾಳು ದೇವಿ ಬಿಎ ಪದವಿ ಅಂತಿಮ ವರ್ಷ ಪೂರೈಸುತ್ತಿದ್ದಳು. ಇನ್ನೊಬ್ಬಳು ಕಮಲೇಶ್, ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪದವಿ ಎಂಟ್ರಿ ಪಡೆದಿದ್ದಳು. ಶನಿವಾರ ಮಧ್ಯಾಹ್ನ ಮೂವರು ಸೋದರಿಯರ ಶವಗಳನ್ನು ಮನೆ ಬಳಿಯ ಬಾವಿಯಿಂದ ಮೇಲೆತ್ತಲಾಗಿದೆ. ಘಟನೆ ಸಂಬಂಧಿಸಿ ಮೂವರು ಸೋದರರಾದ ನಾರ್ಸಿ, ಗೋರ್ಯೋ, ಮುಕೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸೋದರಿಯರು ತಾವಾಗೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ, ಆರೋಪಿಗಳು ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಸಾಯಿಸಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಮೂವರು ಕೂಡ ಪ್ರಾಥಮಿಕ ಶಾಲೆಯಷ್ಟೇ ಓದಿದ್ದರು. ಹುಡುಗಿಯರು ತಮ್ಮ ಬಾಲ್ಯ ವಿವಾಹದ ಬಗ್ಗೆ ತಿಳಿದರೂ ಕಷ್ಟಪಟ್ಟು ಓದುತ್ತಿದ್ದರು. ಆದರೆ ಬಾಲ್ಯವಿವಾಹ ಪದ್ಧತಿಯ ಭೀಕರ ಪರಿಣಾಮ ಅವರ ಮೇಲಾಗಿದ್ದು ಮೂವರು ಸೋದರರು ಹುಡುಗಿಯರ ಮನೆಗೇ ಬಂದು ಉದ್ಧಟತನ ಮೆರೆಯುತ್ತಿದ್ದರು. ಈಗ ಮೂವರು ಸೋದರಿಯರು ಕೂಡ ತಮ್ಮ ತುಂಬು ಗರ್ಭದಲ್ಲೇ ದುರಂತ ಸಾವು ಕಂಡಿದ್ದಾರೆ.
The bodies of three women and two children were found in a well in Jaipur district’s Dudu town on Saturday. The murdered women, who were siblings, were identified as Kalu Devi, Mamta, and Kamlesh. The two kids one aged four and the other just 27 days were Kalu Devi’s children.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm