ಬ್ರೇಕಿಂಗ್ ನ್ಯೂಸ್
29-05-22 06:18 pm HK News Desk ದೇಶ - ವಿದೇಶ
ಹರ್ಯಾಣ, ಮೇ 29 : ತಮ್ಮ ಮಕ್ಕಳು ಗೂಂಡಾಗಳು, ಗಲಭೆಕೋರರು ಮತ್ತು ಅತ್ಯಾಚಾರಿಗಳಾಗಲಿ ಎಂದು ಬಯಸುವವರು ಅವರನ್ನು ಬಿಜೆಪಿಗೆ ಕಳುಹಿಸಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
2024ರ ಹರ್ಯಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿದ ಎಎಪಿ ಮುಖ್ಯಸ್ಥ ಕೇಜ್ರಿವಾಲ್, ಆಡಳಿತಾರೂಢ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು. ಕುರುಕ್ಷೇತ್ರದಲ್ಲಿ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ದಿಲ್ಲಿಯಲ್ಲಿರುವ ಎಎಪಿ ಸರ್ಕಾರವು ಸರ್ಕಾರಿ ಶಾಲೆಗಳನ್ನು ಪರಿವರ್ತನೆ ಮಾಡಿದೆ. ಸರ್ಕಾರಿ ಶಾಲೆಗಳ ಮಕ್ಕಳು ಈಗ ತಮ್ಮ ಎದುರಾಳಿ ಖಾಸಗಿ ಶಾಲೆಗಳಿಗೆ ಸಮನಾಗಿ ಪ್ರದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.

"ದಿಲ್ಲಿ ಸರ್ಕಾರದ ಶಾಲೆಗಳಿಗೆ ಸೇರುವುದಕ್ಕಾಗಿ ಈ ವರ್ಷ ಸುಮಾರು 4 ಲಕ್ಷ ಮಕ್ಕಳು ಖಾಸಗಿ ಶಾಲೆಗಳನ್ನು ತೊರೆದಿದ್ದಾರೆ. ದಿಲ್ಲಿ ಸರ್ಕಾರದ 400 ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ, ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ" ಎಂದು ತಿಳಿಸಿದರು.
"ನಾನು ಬಹಳ ಸರಳ ವ್ಯಕ್ತಿ. ನನಗೆ ರಾಜಕೀಯ ಗೊತ್ತಿಲ್ಲ. ನಾನು ದಿಲ್ಲಿ ಸರ್ಕಾರಿ ಶಾಲೆಗಳಲ್ಲಿ ಸುಧಾರಣೆ ತಂದೆ. ಶಾಳೆಗಳು ಈ ಬಾರಿ ಶೇ 99.7ರಷ್ಟು ಫಲಿತಾಂಶಕ್ಕೆ ತಲುಪಿದೆ. ದಿಲ್ಲಿ ಸರ್ಕಾರಿ ಶಾಲೆಯೊಂದಕ್ಕೆ ಮೆಲಾನಿಯಾ ಟ್ರಂಪ್ (ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ) ಭೇಟಿ ನೀಡಲು ಬಂದಿದ್ದರು. ಮನೋಹರ್ ಲಾಲ್ ಖಟ್ಟರ್ (ಹರ್ಯಾಣ ಸಿಎಂ) ಸರ್ಕಾರದ ಶಾಲೆ ನೋಡಲು ಯಾರು ಬಂದಿದ್ದಾರೆ?" ಎಂದು ಟೀಕಿಸಿದರು.
"ಅವರು ನಿಮ್ಮ ಮಕ್ಕಳಿಗೆ ಯಾವುದೇ ಕೆಲಸ ನೀಡುವುದಿಲ್ಲ. ಏಕೆಂದರೆ ಅವರಿಗೆ ತಮ್ಮ ಪಕ್ಷಕ್ಕೆ ನಿರುದ್ಯೋಗಿ ಗೂಂಡಾಗಳು ಬೇಕಿದ್ದಾರೆ. ಅವರು ನಿಮ್ಮ ಮಕ್ಕಳಿಗೆ ಗಲಭೆ ಮಾಡುವುದನ್ನು ಕಲಿಸುತ್ತಾರೆ ಮತ್ತು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸುತ್ತಾರೆ" ಎಂದು ಆರೋಪಿಸಿದರು.
ಹರ್ಯಾಣದಲ್ಲಿ ಎಎಪಿಗೆ ಅಧಿಕಾರ ನೀಡಿದರೆ ಉಚಿತ ಆರೋಗ್ಯ ಸೌಲಭ್ಯ ಮತ್ತು ವಿದ್ಯುತ್ ಒದಗಿಸಲಾಗುವುದು. ಜತೆಗೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲಾಗುವುದು ಎಂದು ಹೇಳಿದ ಅವರು, ಖಟ್ಟರ್ ಅವರನ್ನು ಸಿಎಂ ಸ್ಥಾನದಿಂದ ಬದಲಿಸಲಾಗುತ್ತದೆ ಎಂಬ ವರದಿಗಳಿಗೆ ಪ್ರತಿಕ್ರಿಯೆ ನೀಡಿದರು. "ಏಕೆ? ಖಟ್ಟರ್ ಸಾಹೇಬರು ಭ್ರಷ್ಟರೇ? ಅವರು ಕೆಲಸ ಮಾಡುತ್ತಿಲ್ಲವೇ? 2024ರ ಚುನಾವಣೆಗೆ ಖಟ್ಟರ್ ಅವರ ಹೆಸರಿನಲ್ಲಿ ಹೋಗಲು ಬಿಜೆಪಿಗೆ ಧೈರ್ಯವಿಲ್ಲವೇ?" ಎಂದು ಲೇವಡಿ ಮಾಡಿದರು.
"If you want to make your children goons, rioters, and rapists, send them to Bharatiya Janata Party (BJP)," Delhi Chief Minister and Aam Aadmi Party (AAP) national convenor Arvind Kejriwal said on Sunday, 29 May, at a rally in Haryana's Kurukshetra.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm