ಬ್ರೇಕಿಂಗ್ ನ್ಯೂಸ್
31-05-22 07:21 pm HK News Desk ದೇಶ - ವಿದೇಶ
ನವದೆಹಲಿ, ಮೆ 31: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಡಿಯಿಂದ ಆರೋಪ ಪಟ್ಟಿ ದಾಖಲಾದ ಬೆನ್ನಲ್ಲೇ, 2018 ರಲ್ಲಿ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ಡಿಕೆ ಶಿವಕುಮಾರ್ ಮತ್ತಿತರರಿಗೆ ಸಮನ್ಸ್ ನೀಡಿದೆ.
ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶಿಸಿದ್ದಾರೆ. ಡಿಕೆ ಶಿವಕುಮಾರ್ ಮತ್ತಿತರರ ವಿರುದ್ಧ ವಿಶೇಷ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರ ಮೂಲಕ ಇಡಿ ಸಲ್ಲಿಸಿದ ಜಾರ್ಜ್ ಶೀಟ್ ನ್ನು ಪರಿಗಣಿಸಿದ ನಂತರ ಕೋರ್ಟ್ ಈ ಆದೇಶ ನೀಡಿದೆ.

ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಈ ಹಿಂದೆ 2019, ಸೆಪ್ಟೆಂಬರ್ ನಲ್ಲಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿತ್ತು. ನಂತರ 2019, ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಸಾವಿರಾರು ಕೋಟಿ ರೂಪಾಯಿ ಮೊತ್ತದ ಹವಾಲಾ ವ್ಯವಹಾರ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯವೊಂದರಲ್ಲಿ ಕಳೆದ ವರ್ಷ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಜಾರ್ಜ್ ಶೀಟ್ ನ್ನು ಈ ಕೇಸ್ ಆಧರಿಸಿದೆ ಎಂದು ಮೂಲಗಳು ಹೇಳಿವೆ.
A Delhi court has summoned Karnataka Congress chief DK Shivakumar in a money laundering case on July 1. Earlier, the Enforcement Directorate had filed a chargesheet against DK Shivakumar and others under various sections of the Prevention of Money Laundering Act (PMLA) before a Delhi court on May 26 Taking to Twitter, Shivakumar had said, "Government agencies are filing cases against me just because I’m not joining BJP."
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm