ಬ್ರೇಕಿಂಗ್ ನ್ಯೂಸ್
03-06-22 10:08 am HK News Desk ದೇಶ - ವಿದೇಶ
ನಾಗಪುರ, ಜೂ 03: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.
ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.
ಇತಿಹಾಸವನ್ನು ನಾವು ರಚನೆ ಮಾಡಿಲ್ಲ. ಇಂದಿನ ಹಿಂದೂ-ಮುಸ್ಲಿಮರೂ ರಚಿಸಿಲ್ಲ. ಭಾರತದ ಮೇಲೆ ಇಸ್ಲಾಂ ರಾಜರು ದಂಡಯಾತ್ರೆ ಕೈಗೊಂಡಾಗ ಜ್ಞಾನವಾಪಿಯಂತಹ ಘಟನೆಗಳು ನಡೆದಿವೆ. ನೂರಾರು ದೇವಸ್ಥಾನಗಳು ನಾಶವಾಗಿವೆ. ಹೀಗಾಗಿ ದಿನಕ್ಕೊಂದು ಹೊಸ ವಿವಾದವನ್ನು ಯಾಕೆ ಸೃಷ್ಟಿ ಮಾಡಬೇಕು? ಎಲ್ಲ ಮಸೀದಿಗಳಲ್ಲೂ ಯಾಕೆ ಶಿವಲಿಂಗವನ್ನು ಹುಡುಕಬೇಕು ಎಂದು ಪ್ರಶ್ನಿಸಿದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್ಎಸ್ಎಸ್ ಪಾಲ್ಗೊಂಡಿತ್ತು ನಿಜ. ಕೆಲ ಐತಿಹಾಸಿಕ ಕಾರಣ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ನಾವು ಭಾಗಿಯಾಗಿದ್ದು ನಿಜ. ಆದರೆ ಇನ್ನು ಮುಂದೆ ಈ ರೀತಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆವು. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.
RSS chief Mohan Bhagwat on Thursday called for a "path through mutual agreement" on the controversy over the filming of Gyanvapi mosque in Uttar Pradesh's Varanasi. Hindu and Muslim petitioners are fighting a legal battle over a court-ordered filming of the mosque complex to check whether there are idols of Hindu Gods and Goddesses, and whether a "Shivling" has been found, as claimed by the Hindu petitioners.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm