ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am