ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am