ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm