ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm