ಬ್ರೇಕಿಂಗ್ ನ್ಯೂಸ್
03-06-22 09:40 pm HK News Desk ದೇಶ - ವಿದೇಶ
ಕಾನ್ಪುರ, ಜೂನ್ 3: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇತ್ತೀಚೆಗೆ ಟಿವಿ ಚರ್ಚೆ ಒಂದರಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಮಹಮ್ಮದ್ ಪೈಗಂಬರ್ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಕಾನ್ಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಅದರಂತೆ ಇಂದು ಹರತಾಳ ನಡೆದಿದ್ದು ನಗರದ ಪರೇಡ್ ಚೌಕ್ ನಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಿಸಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ, ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಸೇರಿ ಪರಸ್ಪರ ಕಲ್ಲು ತೂರಾಟ ನಡೆಸಿವೆ. ಶುಕ್ರವಾರ ಮಧ್ಯಾಹ್ನ ಮಸೀದಿಗೆ ಬಂದಿದ್ದ ಮುಸ್ಲಿಮರ ಒಂದು ಗುಂಪು ಅಲ್ಲಿಂದಲೇ ಬೀದಿಗೆ ಇಳಿದಿತ್ತು. ಪರೇಡ್ ಚೌಕ್ ಮಾರುಕಟ್ಟೆ ಬಳಿ ಜನರು ಸೇರುತ್ತಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ, ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಪುಣೆ ಮತ್ತು ದಕ್ಷಿಣ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನೂಪುರ್ ಶರ್ಮಾ, ಇಸ್ಲಾಂ ಬಗ್ಗೆ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಆಧರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಟೀಕಿಸಿದ್ದರು. ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ ಅನ್ನುವ ವಾದಕ್ಕೆ ಪ್ರತಿಯಾಗಿ ಹೇಳಿಕೆ ಕೊಟ್ಟಿದ್ದ ನೂಪುರ್ ಶರ್ಮಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಜಾಲತಾಣದಲ್ಲಿ ಶರ್ಮಾ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ರೇಪ್ ಮಾಡುತ್ತೇವೆ. ಮನೆಯವರನ್ನು ಕೊಲ್ಲುತ್ತೇವೆ ಎಂದು ಆಕೆಗೆ ಬೆದರಿಕೆ ಹಾಕಲಾಗಿದೆ. ಈ ರೀತಿ ಬೆದರಿಕೆ ಒಡ್ಡಿದವರ ಸ್ಕ್ರೀನ್ ಶಾಟ್ ತೆಗೆದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.
Hundreds clashed in Kanpur after a Muslim organization called to shut down shops at the Parade Market - one of the biggest wholesale markets in the city - over the alleged comments made by BJP leader Nupur Sharma about Prophet Mohammed in a televised debate.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm