ಬ್ರೇಕಿಂಗ್ ನ್ಯೂಸ್
04-06-22 04:18 pm HK News Desk ದೇಶ - ವಿದೇಶ
ಶ್ರೀನಗರ, ಜೂ 04: ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ಮಾಡುತ್ತಿದ್ದಾರೆ. ಪರಿಣಾಮ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರೆ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಭಯೋತ್ಪಾದಕರ ಸರಣಿ ದಾಳಿಯ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
2012 ರಲ್ಲಿ ಪ್ರಧಾನಮಂತ್ರಿಗಳ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರಿ ಪಂಡಿತರು ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ರಾಹುಲ್ ಭಟ್ ಹತ್ಯೆಯಾಗಿದ್ದರು.
ಘಟನೆಯಿಂದ ತಲ್ಲಣಗೊಂಡಿದ್ದ ಪಂಡಿತರು, ವರ್ಗಾವಣೆ ಮಾಡಿ ಇಲ್ಲದಿದ್ದರೆ, ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಭಟ್ ಹತ್ಯೆಯ ನಂತರ ಸುಮಾರು 6,000 ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಆದರೆ ನಿಯೋಜಿತ ದಾಳಿಗಳು ಹೆಚ್ಚಿದ ಹಿನ್ನೆಲೆ ಸರ್ಕಾರ ವರ್ಗಾವಣೆ ಮಾಡಲು ಆದೇಶಿಸಿದೆ.
ಗುರುವಾರ ಬ್ಯಾಂಕ್ ಉದ್ಯೋಗಿ ಮತ್ತು ಓರ್ವ ಇಟ್ಟಿಗೆ ಗೂಡು ಕಾರ್ಮಿಕರನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮೇ 1 ರಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳಿಗೆ ಬ್ಯಾಂಕ್ ಮ್ಯಾನೇಜರ್ ಎಂಟನೇ ಮತ್ತು ಕಾರ್ಮಿಕ ಒಂಬತ್ತನೇ ಬಲಿಪಶುವಾಗಿದ್ದರು.
ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿಗೆ ಮಹಿಳಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಮೇ 18 ರಂದು, ಭಯೋತ್ಪಾದಕರು ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ವೈನ್ ಶಾಪ್ಗೆ ನುಗ್ಗಿ ಗ್ರೆನೇಡ್ ಎಸೆದಿದ್ದರು. ಅಲ್ಲದೇ ಜಮ್ಮು ಪ್ರದೇಶದ ಒಬ್ಬ ವ್ಯಕ್ತಿಯನ್ನು ಕೊಂದಿದ್ದು, ಮೂವರು ಗಾಯಗೊಂಡಿದ್ದರು.
Amid an alarming spike in targeted killings in Kashmir, the government has ordered the transfer of 177 Kashmiri Pandit teachers posted in Srinagar to safer locations following demands to be relocated. The action comes a day after Home Minister Amit Shah chaired a high-level meeting to take stock of the security situation in the restive Union Territory in the wake of a string of attacks targeting the Kashmiri Pandit community and migrants workers.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm