ಬ್ರೇಕಿಂಗ್ ನ್ಯೂಸ್
04-06-22 04:18 pm HK News Desk ದೇಶ - ವಿದೇಶ
ಶ್ರೀನಗರ, ಜೂ 04: ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ಮಾಡುತ್ತಿದ್ದಾರೆ. ಪರಿಣಾಮ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರೆ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಭಯೋತ್ಪಾದಕರ ಸರಣಿ ದಾಳಿಯ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

2012 ರಲ್ಲಿ ಪ್ರಧಾನಮಂತ್ರಿಗಳ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರಿ ಪಂಡಿತರು ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ರಾಹುಲ್ ಭಟ್ ಹತ್ಯೆಯಾಗಿದ್ದರು.

ಘಟನೆಯಿಂದ ತಲ್ಲಣಗೊಂಡಿದ್ದ ಪಂಡಿತರು, ವರ್ಗಾವಣೆ ಮಾಡಿ ಇಲ್ಲದಿದ್ದರೆ, ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಭಟ್ ಹತ್ಯೆಯ ನಂತರ ಸುಮಾರು 6,000 ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಆದರೆ ನಿಯೋಜಿತ ದಾಳಿಗಳು ಹೆಚ್ಚಿದ ಹಿನ್ನೆಲೆ ಸರ್ಕಾರ ವರ್ಗಾವಣೆ ಮಾಡಲು ಆದೇಶಿಸಿದೆ.

ಗುರುವಾರ ಬ್ಯಾಂಕ್ ಉದ್ಯೋಗಿ ಮತ್ತು ಓರ್ವ ಇಟ್ಟಿಗೆ ಗೂಡು ಕಾರ್ಮಿಕರನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮೇ 1 ರಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳಿಗೆ ಬ್ಯಾಂಕ್ ಮ್ಯಾನೇಜರ್ ಎಂಟನೇ ಮತ್ತು ಕಾರ್ಮಿಕ ಒಂಬತ್ತನೇ ಬಲಿಪಶುವಾಗಿದ್ದರು.
ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿಗೆ ಮಹಿಳಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಮೇ 18 ರಂದು, ಭಯೋತ್ಪಾದಕರು ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ವೈನ್ ಶಾಪ್ಗೆ ನುಗ್ಗಿ ಗ್ರೆನೇಡ್ ಎಸೆದಿದ್ದರು. ಅಲ್ಲದೇ ಜಮ್ಮು ಪ್ರದೇಶದ ಒಬ್ಬ ವ್ಯಕ್ತಿಯನ್ನು ಕೊಂದಿದ್ದು, ಮೂವರು ಗಾಯಗೊಂಡಿದ್ದರು.
Amid an alarming spike in targeted killings in Kashmir, the government has ordered the transfer of 177 Kashmiri Pandit teachers posted in Srinagar to safer locations following demands to be relocated. The action comes a day after Home Minister Amit Shah chaired a high-level meeting to take stock of the security situation in the restive Union Territory in the wake of a string of attacks targeting the Kashmiri Pandit community and migrants workers.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm