ಬ್ರೇಕಿಂಗ್ ನ್ಯೂಸ್
05-06-22 01:29 pm HK News Desk ದೇಶ - ವಿದೇಶ
ಢಾಕಾ, ಜೂ 05: ಬಾಂಗ್ಲಾದೇಶದ ಕಂಟೈನರ್ ಡಿಪೋಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 16 ಜನರು ಸಜೀವ ದಹನವಾಗಿದ್ದು, 450ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
ಚಿತ್ತಗಾಂಗ್ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ ಮತ್ತು 450 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ(ಸಿಎಂಸಿಎಚ್)ಗೆ ರವಾನಿಸಲಾಗಿದೆ.


ಪೊಲೀಸ್ ಔಟ್ಪೋಸ್ಟ್ ಸಬ್-ಇನ್ಸ್ಪೆಕ್ಟರ್(ಎಸ್ಐ) ನೂರುಲ್ ಆಲಂ ಅವರು ಮಾತನಾಡಿದ್ದು, ಈ ಘಟನೆಯ ಪ್ರಾಥಮಿಕ ತನಿಖೆ ವೇಳೆ, ಕಂಟೈನರ್ ಡಿಪೋಗೆ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಮುನ್ನವೇ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ರಾತ್ರಿ 11:45ಕ್ಕೆ ಭಾರೀ ಸ್ಫೋಟ ಸಂಭವಿಸಿದೆ ಎಂದು ವಿವರಿಸಿದರು.

ಈ ಬೆನ್ನಲ್ಲೇ ಕಂಟೈನರ್ ಒಂದರಲ್ಲಿ ರಾಸಾಯನಿಕ ಅಂಶವಿದ್ದ ಕಾರಣ ಬೆಂಕಿ ಒಂದು ಕಂಟೇನರ್ ನಿಂದ ಮತ್ತೊಂದು ಕಂಟೇನರ್ ಗೆ ವ್ಯಾಪಿಸಿದೆ. ಈ ಸ್ಫೋಟವು ನೆರೆಹೊರೆಯನ್ನು ಬೆಚ್ಚಿಬೀಳಿಸಿದೆ. ಹತ್ತಿರದ ಮನೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ ಎಂದರು.

ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಸೇರಿ ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿ ನಂದಿಸಲು ಕೆಲಸ ಮಾಡುತ್ತಿವೆ. ಆರು ಆಂಬ್ಯುಲೆನ್ಸ್ಗಳು ಸಹ ಸ್ಥಳದಲ್ಲಿದೆ.
At least 35 people were killed and over 450 injured in a massive fire caused by an explosion that swept through a private chemical container depot in southeastern Bangladesh, officials said on Sunday. On Saturday night, the fire broke out at BM Container Depot in the Kadamrasul area in Sitakunda Upazila in Chittagong. "So far 35 dead bodies reached the morgue here," a police officer stationed at the state-run Chattagram Medical College Hospital (CMCH) told newsmen.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm