ಬ್ರೇಕಿಂಗ್ ನ್ಯೂಸ್
07-06-22 04:54 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 7: ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆಯಿಂದಾಗಿ ಮುಸ್ಲಿಂ ರಾಷ್ಟ್ರಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ಧ ಇಸ್ಲಾಂ ಉಗ್ರವಾದಿ ಸಂಘಟನೆಯೊಂದು ಜೀವ ಬೆದರಿಕೆ ಹಾಕಿದ್ದು, ದೆಹಲಿ ಪೊಲೀಸರು ಆಕೆ ಮತ್ತು ಆಕೆಯ ಕುಟುಂಬಕ್ಕೆ ಭದ್ರತೆ ಒದಗಿಸಿದ್ದಾರೆ.
ನೂಪುರ್ ಶರ್ಮಾ ತನ್ನ ಹೇಳಿಕೆಯನ್ನು ಬೇಷರತ್ತಾಗಿ ಹಿಂದೆಗೆದುಕೊಳ್ಳುವುದರ ಜೊತೆಗೆ ಜಗತ್ತಿನ ಮುಸ್ಲಿಮರಲ್ಲಿ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಪ್ರವಾದಿಯನ್ನು ನಿಂದಿಸಿದವರಿಗೆ ಏನು ಶಿಕ್ಷೆ ಕೊಡುತ್ತೇವೋ ಅದನ್ನು ಮಾಡುತ್ತೇವೆ ಎಂದು ಮುಜಾಹಿದೀನ್ ಗಜ್ವಾತುಲ್ ಹಿಂದ್ ಎನ್ನುವ ಉಗ್ರವಾದಿ ಸಂಘಟನೆ ಹೇಳಿಕೆಯಲ್ಲಿ ಬೆದರಿಕೆ ಹಾಕಿದೆ.
ಈ ಉಗ್ರವಾದಿ ಸಂಘಟನೆಯ ಸದಸ್ಯರು ಜಮ್ಮು ಕಾಶ್ಮೀರದಲ್ಲಿ ಸಕ್ರಿಯ ಆಗಿದ್ದಾರೆ ಎನ್ನಲಾಗುತ್ತಿದ್ದು ಕಳೆದ ಜನವರಿಯಲ್ಲಿ ದೆಹಲಿಯ ಗಾಜಿಪುರ್ ಹೂವಿನ ಮಾರ್ಕೆಟ್ ನಲ್ಲಿ ಐಇಡಿ ಸ್ಫೋಟ ಪ್ರಕರಣದಲ್ಲಿ ಈ ಸಂಘಟನೆಯ ಕೈವಾಡ ಕಂಡುಬಂದಿತ್ತು. ಇದೀಗ ನೂಪುರ್ ಶರ್ಮಾ ತನ್ನ ಹೇಳಿಕೆ ಹಿಂಪಡೆದು ಕ್ಷಮೆ ಕೋರಿದ್ದರೂ, ಆಕೆಯ ವಿರುದ್ಧ ಬೆದರಿಕೆ ಹಾಕಿದೆ. ನೂಪುರ್ ಶರ್ಮಾ ಈ ಮೊದಲು ಇನ್ಸಲ್ಟ್ ಮಾಡಿದ್ರು, ಈಗ ಕ್ಷಮೆ ಕೋರಿದ್ರು. ಆದರೆ ಇದು ಬಿಜೆಪಿಯ ಚಾಣಕ್ಯ ನೀತಿಯಾಗಿದ್ದು, ದ್ವಂದ್ವ ನಡೆಯಾಗಿರುತ್ತದೆ. ಬಿಜೆಪಿ ನಾಯಕರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಆರೆಸ್ಸೆಸ್, ಬಜರಂಗದಳ, ಶ್ರೀರಾಮ ಸೇನೆ, ಶಿವಸೇನೆ ನಾಯಕರು ಇಸ್ಲಾಮ್ ಮತ್ತು ಮುಸ್ಲಿಮರ ಬಗ್ಗೆ ದ್ವೇಷದ ಭಾಷಣ ಮುಂದುವರಿಸಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ತನಗೆ ಬರುತ್ತಿರುವ ಕರೆಗಳು, ಜಾಲತಾಣದಲ್ಲಿ ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಪ್ರಾಭ ಭಯ ಇದೆಯೆಂದು ದೂರು ನೀಡಿದ್ದು, ಪೊಲೀಸರು ಕುಟುಂಬಕ್ಕೆ ರಕ್ಷಣೆ ನೀಡಿದ್ದಾರೆ. ಇತ್ತೀಚೆಗೆ ಜ್ಞಾನವಾಪಿ ಮಸೀದಿಯ ಪ್ರಕರಣದಲ್ಲಿ ಟಿವಿ ವಾಹಿನಿಯ ಚರ್ಚೆ ಒಂದರಲ್ಲಿ ಶಿವಲಿಂಗವನ್ನು ನೀವು ಅವಹೇಳನ ಮಾಡುವುದಾದರೆ, ಪೈಗಂಬರ್ ಹಿನ್ನೆಲೆಯ ಬಗ್ಗೆ ಪ್ರಶ್ನೆ ಎತ್ತಬೇಕಾಗುತ್ತದೆ ಎಂದು ಹೇಳಿ ಪುಸ್ತಕದಲ್ಲಿದ್ದ ಕೆಲವು ವಿಚಾರಗಳನ್ನು ಓದಿ ಹೇಳಿದ್ದರು. ಈ ವಿಚಾರ ಮುಸ್ಲಿಮ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಅದೇ ವಿಚಾರ ಮುಂದಿಟ್ಟು ಜಗತ್ತಿನ 14 ಮುಸ್ಲಿಂ ರಾಷ್ಟ್ರಗಳು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರದ ಬಗ್ಗೆ ಕಿಡಿಕಾರಿದ್ದವು. ಇದರ ಬೆನ್ನಲ್ಲೇ ಬಿಜೆಪಿ ನೂಪುರ್ ಶರ್ಮಾರನ್ನು ಪಕ್ಷದಿಂದ ಅಮಾನತು ಮಾಡಿತ್ತು.
Terror outfit Mujahideen Ghazwatul Hind has threatened BJP leader Nupur Sharma with dire consequences unless she tenders an unconditional apology for her controversial remarks on Prophet Muhammad.“We instruct Nupur Sharma to take back her statement and apologise to the whole world, otherwise we will do what is done to those who dare to insult the Prophet,” Mujahideen Ghazwatul Hind said in a statement posted on Telegram.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm