ಬ್ರೇಕಿಂಗ್ ನ್ಯೂಸ್
07-06-22 08:30 pm HK News Desk ದೇಶ - ವಿದೇಶ
ಅಬುಧಾಬಿ, ಜೂ 07: ದಕ್ಷಿಣ ಆಫ್ರಿಕಾದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಭಾರತೀಯ ಮೂಲದ ಉದ್ಯಮಿಗಳಾದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ಬಂಧಿಸಲಾಗಿದೆ.
ಯುಎಇನಲ್ಲಿ ಕಾನೂನು ಜಾರಿ ಅಧಿಕಾರಿಗಳು ಗುಪ್ತಾ ಕುಟುಂಬದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಬಂಧಿಸಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ತಿಳಿಸಿದೆ.
ಗುಪ್ತಾ ಸಹೋದರರು 24 ವರ್ಷಗಳ ಹಿಂದೆ ವ್ಯಾಪಾರ ಅವಕಾಶಗಳನ್ನು ಹುಡುಕಿಕೊಂಡು ದಕ್ಷಿಣ ಆಫ್ರಿಕಾಗೆ ಹೋಗಿದ್ದರು. ಅವರ ವ್ಯಾಪಾರ ನಿಧಾನವಾಗಿ ಹರಡಿ, ದಕ್ಷಿಣ ಆಫ್ರಿಕಾದ 10 ಶ್ರೀಮಂತ ವ್ಯಾಪಾರಿ ಕುಟುಂಬಗಳಲ್ಲಿ ಒಂದಾಯಿತು.

ಗುಪ್ತಾ ಸಹೋದರರು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಅವರನ್ನು ರಾಜಕೀಯ ಹಾಗೂ ವ್ಯಾಪಾರ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಜುಮಾ ಅವರು ಅಧಿಕಾರದಲ್ಲಿದ್ದಾಗ 2009 ರಿಂದ 2018 ರವರೆಗೆ ಗುಪ್ತಾ ಸಹೋದರರು ದಿ ನ್ಯೂ ಏಜ್(ಟಿಎನ್ಎ) ಪತ್ರಿಕೆಗಾಗಿ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಉತ್ತರ ಪ್ರದೇಶದ ಸಹರಾನ್ಪುರ ಮೂಲದ ಮೂವರು ಗುಪ್ತಾ ಸಹೋದರರಾದ ಅಜಯ್, ಅತುಲ್ ಹಾಗೂ ರಾಜೇಶ್ ಟಿಎನ್ಎ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸದ್ಯ ಪತ್ರಿಕೆ ಮುಚ್ಚಲಾಗಿದೆ. ಬಳಿಕ ಮೂರೂ ಸಹೋದರರು ದುಬೈನಲ್ಲಿ ನೆಲೆಸಿದ್ದು, ಅವರ ವಿರುದ್ಧ ದಕ್ಷಿಣ ಆಫ್ರಿಕಾ ಕ್ರಿಮಿಲ್ ಆರೋಪಗಳನ್ನು ಹೊರಿಸಿ, ಹಸ್ತಾಂತರಿಸುವಂತೆ ಕೇಳಿಕೊಂಡಿದೆ.
Atul and Rajesh Gupta are accused in South Africa of profiting from their close links with former president Jacob Zuma and exerting unfair influence. Extradition talks are taking place between the two countries. The brothers fled South Africa after a judicial commission began probing their involvement in corruption in 2018.They are accused of paying financial bribes in order to win lucrative state contracts and influence powerful government appointments.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm